26.7 C
New York
Saturday, July 27, 2024

Buy now

spot_img

ಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ : ಪೊಲೀಸ್ ಬಿಗಿ ಭದ್ರತೆ

ನಾಗಮಂಗಲ :- ಹಿಂದೂ ಯುವಕನ ಮೇಲೆ ಅನ್ಯ ಕೋಮಿನ ಗುಂಪು ಮಾರಣಾಂತಿಕ ಹಲ್ಲೆ ಮಾಡಿ,ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದು ಪ್ರಕರಣ ಹಿನ್ನಲೆಯಲ್ಲಿ ತಾಲೂಕಿನ ಬೆಳ್ಳೂರಿನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಬೆಳ್ಳೂರಿನ ಅಭಿಲಾಶ್ ಮೇಲೆ ಮಾರಕಾಸ್ರದಿಂದ ಹಲ್ಲೆ ಮಾಡಿರುವ ಗುಂಪು ಇದೇ ವೇಳೆ ಇತರರ ಮೇಲೆ ಹಲ್ಲೆ ನಡಸಿ ಮನೆಗಳಿಗೆ ನುಗ್ಗಿ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಲ್ಲದೆ ಮಹಿಳೆಯರಿಗೆ ಬೆದರಿಕೆ ಯೊಡ್ಡಿದೆ.

ಸೋಮವಾರ ಸಂಜೆ ಅನ್ಯ ಕೋಮಿನ ಗುಂಪು ದುಷ್ಕೃತ್ಯ ಎಸಗಿದ್ದು,ಇದರಿಂದ ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಂಡಿದ್ದು, ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದ್ದು ಗಾಯಾಳು ಅಭಿಲಾಶ್ ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳೆದ ಶುಕ್ರವಾರ ಸಂತೆ ಬೀದಿ ರಸ್ತೆಯಲ್ಲಿ ಅಭಿಲಾಶ್, ನಾಗೇಶ್ ಮತ್ತು ಮುಸ್ಲಿಂ ಯುವಕರ ನಡುವೆ ಸಣ್ಣ ವಿಚಾರಕ್ಕೆ ಮಾತಿನ ಚಕಮಕಿ ನಡೆದಿತ್ತು,ಮಾರನೇ ದಿನ ಗಂಗಾ ಆರತಿ ಹಬ್ಬ ಆಚರಣೆಯಲ್ಲಿ ನಿರತರಾಗಿದ್ದಾಗ ತಡರಾತ್ರಿ ವೇಳೆ ಅಲ್ಲಿಗೆ ತೆರಳಿದ್ದ ಅನ್ಯ ಕೋಮಿನ ಗುಂಪು ಅವರಿಬ್ಬರನ್ನು ನಾವು ಬಿಡೋದಿಲ್ಲ, ನೀವು ಹಬ್ಬ ಮಾಡಿಕೊಳ್ಳಿ, ನಮ್ಮದು ಮದುವೆ ಇದೆ ಆಮೇಲೆ ಗತಿ ಕಾಣಿಸುತ್ತೇವೆ ಎಂದು ಮಹಿಳೆಯರನ್ನ ಬೆದರಿಸಿತ್ತು, ಇದರಿಂದ ಹೆದರಿದ ನಾಲ್ಕೈದು ಮಹಿಳೆಯರು ಬೆಳ್ಳೂರು ಪೊಲೀಸ್ ಠಾಣೆಗೆ ತೆರಳಿ ವಿಚಾರ ತಿಳಿಸಿ ದೂರು ನೀಡಲು ಮುಂದಾದಾಗ ಪೊಲೀಸರು ಬೆಳಿಗ್ಗೆ ಬನ್ನಿ ಎಂದು ಸಾಗ ಹಾಕಿದ್ದರು.
ಮತ್ತೆ ಯಾರು ಇತ್ತ ಸುಳಿಯದ ಹಿನ್ನೆಲೆಯಲ್ಲಿ ತೊಂದರೆ ಇಲ್ಲ ಎಂದು ಮಹಿಳೆಯರು ಸುಮ್ಮನಾಗಿದ್ದರು ಆದರೆ ಸೋಮವಾರ ಸಂಜೆ ಅನ್ಯ ಕೋಮಿನ ಗುಂಪು ಹಿಂದೂ ಯುವಕರನ್ನ ಹುಡುಕಾಡಿ ಅಭಿಲಾಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೆ ತಡೆಯಲು ಬಂದವರ ಮೇಲೆ ಹಲ್ಲೆ ನಡೆಸಿ ಮನೆಗಳ ಕಿಟಕಿ ಗಾಜು ಪುಡಿಪುಡಿ ಮಾಡಿ ಮಹಿಳೆಯರಿಗೆ ಜೀವ ಬೆದರಿಕೆ ಹಾಕಿದ್ದಾರೆ, ತಕ್ಷಣ ಸ್ಥಳೀಯರು ಗಾಯಾಳು ಅಭಿಲಾಷ್ ನನ್ನ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದು ದಾಂಧಲೆಗೂ ಮುನ್ನ ವಿದ್ಯುತ್ ತೆಗೆದಿರುವುದು ಹಾಗೂ ಹಲ್ಲೆ ಮಾಡಿದ ನಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲು ಮುಂದಾಗಿರುವುದು ಪೂರ್ವ ಯೋಜಿತ ಸಂಚು ಎಂದು ಹೇಳಲಾಗಿದೆ.
ಪ್ರಕರಣದ ಹಿನ್ನೆಲೆಯಲ್ಲಿ ಬೆಳ್ಳೂರು ಪಟ್ಟಣದಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ
ಗೊಂಡಿದ್ದು, ಪಟ್ಟಣದ ಆಯಾ ಕಟ್ಟಿನ ಪ್ರದೇಶ, ಪೊಲೀಸ್ ಠಾಣೆ ಹಾಗೂ ಆದಿಚುಂಚನಗಿರಿ ಆಸ್ಪತ್ರೆ ಬಳಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಬೆಳ್ಳೂರಿಗೆ ಭೇಟಿ ನೀಡಿ ಶಾಂತಿ ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಬೆಳ್ಳೂರಿನ ಘಟನಾಸ್ಥಳಕ್ಕೆ ಭೇಟಿ ನೀಡಿ ನೊಂದ ಮಹಿಳೆಯರನ್ನು ಭೇಟಿಯಾಗಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಮಾಜಿ ಶಾಸಕ ಸುರೇಶ ಗೌಡ ಮಾತನಾಡಿ, ಯುವಕರ ಗುಂಪೊಂದು ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮಹಿಳೆಯರಿಗೆ ಬೆದರಿಕೆ ಹಾಕಿದ್ದಲ್ಲದೆ ಮನೆಗಳಿಗೆ ಹಾನಿ ಮಾಡಿದ್ದಾರೆ, ಘಟನೆ ನಂತರ ಪೊಲೀಸರು ಹಲವರನ್ನು ಬಂದಿಸಿ ಠಾಣೆಗೆ ಕರೆದೊಯ್ಯುವ ಮಾರ್ಗ ಮದ್ಯೆ ಅವರನ್ನೆಲ್ಲ ಬಿಟ್ಟು ಕಳುಹಿಸಿದ್ದಾರೆ, ಇದರ ಹಿನ್ನೆಲೆ ಏನು ಎಂದು ಪ್ರಶ್ನಿಸಿದರು.
ಅಷ್ಟೇ ಅಲ್ಲದೆ ಸಿಸಿಟಿವಿ ಫೊಟೇಜ್ ಗಳನ್ನ ಯಾರೂ ಕೂಡ ನೀಡದಂತೆ ಬೆದರಿಕೆ ಹಾಕಲಾಗಿದೆ, ನಾವು ಯಾರ ಪರವೂ ಅಲ್ಲ, ನ್ಯಾಯದ ಪರ ಆದರೆ ಕಾಂಗ್ರೆಸ್ ಸರ್ಕಾರ ಒಂದು ಧರ್ಮವನ್ನು ಓಲೈಸುವ ರಾಜಕಾರಣ ಮಾಡುತ್ತ ಬೇರೆ ಧರ್ಮಿಯರ ಬಗ್ಗೆ ನಿರ್ಲಕ್ಷ ತೋರಿದೆ ಎಂದು ಆರೋಪಿಸಿದರು.
ಬೆಳ್ಳೂರು ಪ್ರಕರಣದಲ್ಲಿ ಪೊಲೀಸರ ವೈಪಲ್ಯ ಎದ್ದು ಕಾಣುತ್ತಿದೆ, ಮುನ್ನೆಚ್ಚರಿಕೆ ವಹಿಸಿದ್ದರೆ ಘಟನೆ ತಡೆಯಬಹುದಾಗಿತ್ತು, ದುಷ್ಕೃತ್ಯ ಮಾಡಿರುವವರನ್ನು ರಕ್ಷಿಸಲು ಮುಂದಾಗಬಾರದು,ಪೊಲೀಸರು ತಾರತಮ್ಯ ಮಾಡದೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಬೆಳ್ಳೂರಿನ ಎಲ್ಲಾ ಧರ್ಮದ ಜನತೆ ಶಾಂತಿ ಕಾಪಾಡಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles