14 C
New York
Monday, March 10, 2025

Buy now

spot_img

ಲಕ್ಷ್ಮೇಗೌಡನದೊಡ್ಡಿಯಲ್ಲಿ ಕುತ್ತಿಗೆ ಕುಯ್ದು ವ್ಯಕ್ತಿ ಹತ್ಯೆ

ಕೆ.ಎಂ ದೊಡ್ಡಿ :- ವ್ಯಕ್ತಿಯೊಬ್ಬನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗ್ಯೆದಿರುವ ಘಟನೆ  ಸಮೀಪದ ಲಕ್ಷ್ಮೇಗೌಡನದೊಡ್ಡಿಯಲ್ಲಿ ನಡೆದಿದೆ.
ಹಣಕಾಸು ವಿಚಾರವಾಗಿ ಮೂವರ ಗುಂಪು ಗ್ರಾಮದ ಎಲ್.ಕೃಷ್ಣೆಗೌಡ (47) ರನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.
ಮದನಹಟ್ಟಿ ದೇವಾಲಯದ ಬಳಿ ಕೃಷ್ಣೇಗೌಡರ ಮೇಲೆ ಮಾರಕಾಸ್ರದಿಂದ ದಾಳಿ ಮಾಡಿ ದುಷ್ಕೃತ್ಯ ಎಸಗಿದ್ದು ಬೆಳ್ಳಂ ಬೆಳಗ್ಗೆ ಹರಿದ ನೆತ್ತರಿಗೆ ಗ್ರಾಮದ ಜನತೆ ಬೆಚ್ಚಿ ಬಿದ್ದಿದ್ದಾರೆ.
ಮಂಗಳವಾರ ಮುಂಜಾನೆ ಎಂದಿನಂತೆ ಡೈರಿಗೆ ತೆರಳಿ ಹಾಲು ಹಾಕಿ ಮನೆಗೆ ತೆರಳಿದ್ದ ಎಲ್ ಕೃಷ್ಣೇಗೌಡ ತೋಟದ ಬಳಿ ಎಮ್ಮೆ ಕರು ಕಟ್ಟುತ್ತಿದ್ದಾಗ ಪ್ಲಾಟಿನಂ ಬೈಕಿನಲ್ಲಿ ಬಂದ ಮೂವರು ಏಕಾಏಕಿ ಮುಗಿ ಬಿದ್ದು ಹೊಟ್ಟೆಗೆ ಇರಿದಿದ್ದು ರಕ್ತಸ್ರಾವದಿಂದ ಕೆಳಕ್ಕೆ ಬಿದ್ದಿದ್ದು ಈ ವೇಳೆ ಕುತ್ತಿಗೆ ಕುಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಹಣಕಾಸು ವಿಚಾರವಾಗಿ ದುಷ್ಕೃತ್ಯ ನಡೆದಿದೆ ಎಂದು ಶಂಕಿಸಲಾಗಿದ್ದು, ಕೆ ಎಂ ದೊಡ್ಡಿ  ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಶ್ವಾನದಳ  ಮತ್ತು ಬೆರಳಚ್ಚು ತಜ್ಞರ ಜೊತೆ ಪ್ರಾಥಮಿಕ ತನಿಖೆ ನಡೆಸಿ   ಮೃತ ದೇಹವನ್ನು ಆಸ್ಪತ್ರೆಗೆ ಸ್ಥಳಾಂತರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಹತ್ಯೆಯಾದ  ಕೃಷ್ಣೆಗೌಡರಿಗೆ ಇಬ್ಬರು ಮಕ್ಕಳು,ಪತ್ನಿ ಹಾಗೂ ತಾಯಿ ಇದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles