8.3 C
New York
Wednesday, April 16, 2025

Buy now

spot_img

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ:-  ಪೆಟ್ರೋಲ್‌ – ಡೀಸೆಲ್,ಅಡುಗೆ ಅನಿಲ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಪಟಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಘಟಕದ ನೇತೃತ್ವದಲ್ಲಿ ನಗರದ ಜಯ ಚಾಮರಾಜೇಂದ್ರ  ಒಡೆಯರ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಅಡುಗೆ ಅನಿಲ ಸಿಲಿಂಡರ್ ಗಳನ್ನು ತಲೆ ಮೇಲೆ ಹೊತ್ತು ಸೌದೆ ಒಲೆ ಉರಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಎನ್ ಡಿ ಎ ಸರ್ಕಾರ ಅಗತ್ಯ ವಸ್ತುಗಳ  ಬೆಲೆ ಏರಿಕೆ ಮಾಡಿ ಬಡವರ ರಕ್ತ ಹೀರುತ್ತಿದೆ.ಇದರ ಬಗ್ಗೆ ಹೋರಾಟ ಮಾಡ ಬೇಕಾದ ಬಿಜೆಪಿ ಪಕ್ಷದ ಕಾರ್ಯಕರ್ತರು,ಕಾಂಗ್ರೆಸ್‌ ವಿರುದ್ಧ ಜನಾಕ್ರೋಶಯಾತ್ರೆ ಮಾಡುತ್ತಿ ರುವುದು ಹಾಸ್ಯಾಸ್ಪದವಾಗಿದೆ, ಇಂತಹ ಜನ ವಿರೋಧಿ ನೀತಿಯು ಜನರ ಹಾದಿ ತಪ್ಪಿಸುವ ತಂತ್ರ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ 2 ರೂ ಹಾಗೂ ಅಡುಗೆ ಅನಿಲದ ದರವನ್ನು 50 ರೂ ಹೆಚ್ಚಳ ಮಾಡಿದೆ ಬಿಜೆಪಿ ಮುಖಂಡರು ಬೆಲೆ ಹೆಚ್ಚಳವನ್ನು  ಸಮರ್ಥನೆ ಮಾಡುತ್ತಿರುವುದು  ವಿಷಾಧಕರ ಸಂಗತಿಯಾಗಿದೆ.ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ.ನಮ್ಮ ತೆರಿಗೆ ಪಾಲನ್ನು ನೀಡದೆ ದ್ವೇಷದ ರಾಜಕಾರಣ ಮಾಡುತ್ತಿದೆ.ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಇಳಿಕೆ ಕಂಡಿದ್ದರೂ ದೇಶದಲ್ಲಿ ಇಂಧನದ ಬೆಲೆ ಹೆಚ್ಚಳ ಮಾಡಿರುವುದು  ಮೋದಿ ಸರ್ಕಾರದ ದುರಾಡಳಿತ ಎಂದು ಆಕ್ರೋಶಿಸಿದರು.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಸಿ ಡಿ ಗಂಗಾಧರ್,ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲೇಂದ್ರ ಕುಮಾರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ನಾಗರಾಜು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಿತ್ರ,ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸುನೀಲ್,ಗುರು ಕುಮಾರ್,, ಕನ್ನಲಿ ಚನ್ನಪ್ಪ,ಹೆಚ್.ಎಂ.ಉದಯ್ ಕುಮಾರ್, ಚಿನಕುರಳಿ ರಮೇಶ್, ಅಭಿಲಾಷ್,ಮಂಜು, ದ್ಯಾವಣ್ಣ, ವೀಣಾ ಶಂಕರ್ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles