Saturday, May 17, 2025
Homeಜಿಲ್ಲೆಗಾಯಕ ಸೋನು ನಿಗಮ್ ವಿರುದ್ಧ ಕ್ರಮಕ್ಕೆ ಕನ್ನಡ ಸೇನೆ ಆಗ್ರಹ

ಗಾಯಕ ಸೋನು ನಿಗಮ್ ವಿರುದ್ಧ ಕ್ರಮಕ್ಕೆ ಕನ್ನಡ ಸೇನೆ ಆಗ್ರಹ

ಮಂಡ್ಯ : ಕರ್ನಾಟಕದ ನೆಲದಲ್ಲಿ ಕನ್ನಡಿಗರನ್ನು ಗೂಂಡಾಗಳು ಮತ್ತು ಭಯೋತ್ಪಾದಕರು ಎಂದು ಅವಮಾನಿಸಿರುವ ಗಾಯಕ ಸೋನು ನಿಗಮ್‌ರನ್ನು ಬಂಧಿಸಬೇಕು ಎಂದು ಕನ್ನಡ ಸೇನೆ ಕಾರ್ಯಕರ್ತರು ಆಗ್ರಹಿಸಿದರು.
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಿಮ್ಮಯ್ಯರಿಗೆ ದೂರು ಸಲ್ಲಿಸಿದ ಸೇನೆಯ ಕಾರ್ಯಕರ್ತರು ಗಾಯಕ ಸೋನು ನಿಗಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ನೆಲದಲ್ಲಿ ಸೋನು ನಿಗಮ್  ಕನ್ನಡಿಗರನ್ನು ಗೂಂಡಾಗಳು ಮತ್ತು ಭಯೋತ್ಪಾದಕರು ಎಂದು ಅವಮಾನಿಸಿದ್ದಾರೆ ಕನ್ನಡಿಗರನ್ನು ಕೀಳಾಗಿ ಕಂಡಿರುವುದು ಮಾತ್ರವಲ್ಲ. ಕನ್ನಡಿಗರನ್ನು ದೇಶದ್ರೋಹಿಗಳೆಂದು ಬಿಂಬಿಸಿ, ಅವರನ್ನು ಖಳನಾಯಕರನ್ನಾಗಿ ಮಾಡಿರುವ ಹುನ್ನಾರ ನಡೆಯುತ್ತಿದೆ. ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಒತ್ತಾಯಿಸಿದರು.
ಕನ್ನಡಿಗರನ್ನು ನಿಂದಿಸಿರುವ ಸೋನುನಿಗಮ್ ರನ್ನು ಕನ್ನಡ ಚಿತ್ರರಂಗ ಬಹಿಷ್ಕರಿಸಬೇಕು, ಕರ್ನಾಟಕದ ಜನಪ್ರತಿನಿಧಿಗಳು ಮೌನ ಮುರಿದು ಮಾತನಾಡಬೇಕು. ಮೂರು ಸಾವಿರ ವರ್ಷ ಹಾಗೂ ದೇಶದ ಎಲ್ಲಾ ಭಾಷೆಯ ತಾಯಿ ಭಾಷೆ ಕನ್ನಡಕ್ಕೆ ಅವಮಾನಿಸಿದ ಯಾವುದೇ ವ್ಯಕ್ತಿಯಾದರೂ ನಿಂದಿಸಿದರೆ ಅಂತವರ ವಿರುದ್ಧ 24 ತಾಸಿನೊಳಗೆ  ಕಾನೂನುಕ್ರಮ ಕೈಗೊಳ್ಳುವ ಕಾನೂನು ರೂಪಿಸಬೇಕೆಂದು ಆಗ್ರಹಿಸಿದರು.
ಕನ್ನಡ ಸೈನ್ಯ ಜಿಲ್ಲಾಧ್ಯಕ್ಷ ಮಂಜುನಾಥ್.ಹೆಚ್.ಸಿ, ಮಹಾಂತಪ್ಪ, ಸೌಭಾಗ್ಯ ಆರ್, ಶಿವಾಲಿ, ಅಭಿಷೇಕ್, ಪವಿತ್ರ ನಾಗರಾಜ್, ವೇಣು ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments