Friday, April 17, 2026
Homeಜಿಲ್ಲೆಯುವ ರೈತರನ್ನ ಮದುವೆಯಾಗುವ ಯುವತಿಗೆ 5 ಲಕ್ಷ ನೀಡಿ

ಯುವ ರೈತರನ್ನ ಮದುವೆಯಾಗುವ ಯುವತಿಗೆ 5 ಲಕ್ಷ ನೀಡಿ

ಮಂಡ್ಯ :- ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ 5 ಲಕ್ಷ ಪ್ರೋತ್ಸಾಹ ಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಮನವಿ ಮಾಡಿದರು
ಕೈಯಲ್ಲಿ ತಾಂಬೂಲ ಹಿಡಿದು, ವರ ನಂತೆ ಬಟ್ಟೆ ತೊಟ್ಟು, ಹಣೆಗೆ ಬಾಸಿಂಗ ಕಟ್ಟಿದ ಯುವಕರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.
ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದ ಮಾದರಿಯಲ್ಲಿ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ₹5 ಲಕ್ಷ ಪ್ರೋತ್ಸಾಹ ನೀಢುವ ಮೂಲಕ ಯುವ ರೈತರ ಮದುವೆಯನ್ನು ಪ್ರೋತ್ಸಾಹಿಸುವ ಕೆಲಸ ಇನ್ನಾದರೂ ಆಗಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೆಲೆ ಸರ್ಕಾರಿ ಕೆಲಸಕ್ಕೆ ನೇಮಕಾತಿ ಆಗುವುದು ತೀರಾ ವಿಳಂಬವಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಸರ್ಕಾರದ ನೀತಿಯಿಂದಾಗಿ ಖಾಸಗಿ ಕಂಪನಿಗಳು ಕರ್ನಾಟಕಕ್ಕೆ ಉದ್ಯಮ ಸ್ಥಾಪನೆಗಾಗಿ ಬರುತ್ತಿಲ್ಲ ಎಂದು ಆರೋಪಿಸಿದರು.
ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲ, ಸಮರ್ಪಕವಾಗಿ ಬೆಳೆ ಬೆಳೆಯಲು ನೀರು ಇಲ್ಲ. ಕೃಷಿ ನಂಬಿಕೊಂಡಿರುವವರ ಬದುಕು ಮೂರಾ ಬಟ್ಟೆಯಾಗಿದೆ. ಇತ್ತ ಕೃಷಿಯನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳಬೇಕೆಂದಿರುವ ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ ಎಂದು ವಿಷಾದಿಸಿದರು.
ಮುಖಂಡರಾದ ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು, ಶಿವಲಿಂಗಯ್ಯ, ಮಾದರಾಜು, ವೈರಮುಡಿ, ಆನಂದ ಕೆಂಪಯ್ಯನದೊಡ್ಡಿ, ನಂದೀಶ್‌ ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments